ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿನಲ್ಲಿ ಬೆಂಕಿ: ಪ್ರಯಾಣಿಕರು ಪಾರು

Last Updated 13 ಜನವರಿ 2012, 19:30 IST
ಅಕ್ಷರ ಗಾತ್ರ

ಭುವನೇಶ್ವರ :ಚೆನ್ನೈ-ಹೌರಾ ಎಕ್ಸ್‌ಪ್ರೆಸ್ ರೈಲಿನ ಸಾಮಾನ್ಯ ಬೋಗಿಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯನ್ನು ತಕ್ಷಣವೇ ನಂದಿಸಿದ್ದರಿಂದ ಯಾವುದೇ ಹಾನಿ ಸಂಭವಿಸಿಲ್ಲ.

ಭುವನೇಶ್ವರ ಮುಖ್ಯ ರೈಲು ನಿಲ್ದಾಣದ ಕಡೆಗೆ ಹೊರಟಿದ್ದ ಈ ರೈಲು ಲಿಂಗರಾಜ ನಿಲ್ದಾಣದ ಸಮೀಪ ಆಗಮಿಸುತ್ತಿದ್ದಾಗ ಎಂಜಿನ್‌ನಿಂದ ಎರಡನೇ ಬೋಗಿಯಲ್ಲಿ ಬೆಂಕಿ ಕಾಣಿಸಿತು ಎಂದು ಪಶ್ಚಿಮ ಕರಾವಳಿ ರೈಲ್ವೆ ವಕ್ತಾರರು ತಿಳಿಸಿದ್ದಾರೆ.

ಯಾರಿಗೂ ಗಾಯಗಳಾಗಿಲ್ಲ.  ಅಗ್ನಿಶಾಮಕ ಸಿಬ್ಬಂದಿ 15-20 ನಿಮಿಷಗಳಲ್ಲೇ ಬೆಂಕಿಯನ್ನು ಹತೋಟಿಗೆ ತಂದರು. ಬೆಂಕಿ ಕಾಣಿಸಿಕೊಂಡ ಬಳಿಕ ಪ್ರಯಾಣಿಕರು ರೈಲಿನ ತುರ್ತು ಸರಪಳಿ ಎಳೆದು ನಿಲ್ಲಿಸಿದ ಬಳಿಕ ಬೋಗಿಯಲ್ಲಿದ್ದ ಪ್ರಯಾಣಿಕರು ತಕ್ಷಣವೇ ಹೊರಗೆ ಬಂದರು. ಇದರಿಂದ 2 ಗಂಟೆಗಳ ಕಾಲ ರೈಲು ಸಂಚಾರ ವಿಳಂಬವಾಯಿತು. ಬೋಗಿಯ ಕೆಲ ಭಾಗ ಜಖಂಗೊಂಡಿದೆ.

ಪ್ರಯಾಣಿಕರ ನಿರ್ಲಕ್ಷ್ಯದಿಂದ ಈ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿದ್ದು, ಘಟನೆಗೆ ಕಾರಣ ತಿಳಿಯಲು ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT