ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಮಾರ್ಗ: ಭೂಸ್ವಾಧೀನಕ್ಕೆ ವಿರೋಧ

Last Updated 13 ಅಕ್ಟೋಬರ್ 2012, 9:45 IST
ಅಕ್ಷರ ಗಾತ್ರ

ಬಾಗಲಕೋಟೆ: ಉದ್ದೇಶಿತ ಬಾಗಲಕೋಟೆ- ಕುಡುಚಿ ರೈಲು ಮಾರ್ಗ ನಿರ್ಮಾಣದಿಂದ ಭೂಮಿ ಕಳೆದುಕೊಳ್ಳುವ ರೈತರಿಗೆ ಹೆಚ್ಚಿನ ಪರಿಹಾರ ಒದಗಿಸಬೇಕು ಎಂದು ಬಾಗಲಕೋಟೆ ಮತ್ತು ಮುಚಖಂಡಿ ಭಾಗದ ಸಂತ್ರಸ್ತರು ಶುಕ್ರವಾರ ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ ಅವರಿಗೆ ಮನವಿ ಸಲ್ಲಿಸಿದರು.

ರೈಲು ಮಾರ್ಗ ನಿರ್ಮಾಣದಿಂದ ಭೂಮಿ ಕಳೆದುಕೊಳ್ಳುವ ಸಂತ್ರಸ್ಥರು ಸೂಕ್ತ ಪರಿಹಾರ ಒದಗಿಸುವಂತೆ ಕೋರಿ ಇತ್ತೀಚೆಗೆ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲು ಹೋದ ಸಂದರ್ಭದಲ್ಲಿ ರೈತರ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸಿಲ್ಲ, ಉಪವಿಭಾಗಾಧಿಕಾರಿ ಅವರ ನಡವಳಿಕೆ ಬೇಷರ ತರಿಸಿದೆ ಎಂದು ದೂರಿದರು.

ಭೂಮಿ ಕಳೆದುಕೊಳ್ಳುವ ಪ್ರತಿ ರೈತನ ಕುಟುಂಬದ ಒಬ್ಬರಿಗೆ `ಡಿ~ದರ್ಜೆ ನೌಕರಿ ನೀಡಬೇಕು, ರೈಲು ಮಾರ್ಗ ಹಾದು ಹೋಗುವ ಜಮೀನನ್ನು ವಶಪಡಿಸಿಕೊಂಡ ಬಳಿಕ ಉಳಿಯುವ ತುಂಡು ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕು, ಭೂಮಿಯ ಪರಿಹಾರ ಧನವನ್ನು ಶೇ. 25ರ ಬದಲಾಗಿ ಶೇ.75 ನೀಡಬೇಕು ಎಂದು ಆಗ್ರಹಿಸಿದರು.

ರೈಲು ಮಾರ್ಗ ಸಂತ್ರಸ್ಥರ ಹಿತರಕ್ಷಣಾ ಸಮಿತಿಯ ಪ್ರಮುಖರಾದ ವೈ.ಆರ್.ಲಮಾಣಿ, ಮನೋಹರ ಚಿತ್ತರಗಿ, ಬಸಪ್ಪ ಸ್ವಾಗಿ, ದೇನಪ್ಪ ಲಮಾಣಿ, ರೇವಣಪ್ಪ ಲಮಾಣಿ, ಹೀರೂ ಲಮಾಣಿ, ಶಂಕ್ರಪ್ಪ ಲಮಾಣಿ, ಮಹಾಂತೇಶ ಚೊಳಚಗುಡ್ಡ, ಸಂಗಪ್ಪ ಕೊಪ್ಪದ, ಗಂಗರಾಮ ಲಮಾಣಿ, ರಾಮ ಲಮಾಣಿ, ಭೀಮಪ್ಪ ಲಮಾಣಿ, ಕೃಷ್ಣಪ್ಪ ಲಮಾಣಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT