ಹೈದರಾಬಾದ್, (ಪಿಟಿಐ): ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸುತ್ತಿರುವ ತೆಲಂಗಾಣ ಜಂಟಿ ಕ್ರಿಯಾ ಸಮಿತಿ ಇದೇ 13ರಿಂದ 17ರವರೆಗೆ ರೈಲು ತಡೆ ಚಳವಳಿಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಮಧ್ಯ ರೈಲ್ವೆ (ಎಸ್ಸಿಆರ್) ಮೂರು ದಿನ 124 ಪ್ರಯಾಣಿಕರ ರೈಲುಗಳ ಸಂಚಾರ ರದ್ದುಪಡಿಸಿದೆ.
ಸ್ಥಳೀಯವಾಗಿ ಸಂಚರಿಸುವ ರೈಲುಗಳು ಸೇರಿದಂತೆ ಉಳಿದ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಿದ್ದು, ಸಂಚಾರ ಮಾರ್ಗ ಮತ್ತು ವೇಳಾಪಟ್ಟಿಯನ್ನು ಬದಲಾವಣೆ ಮಾಡಿದೆ.