ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಸೇವೆ ನೇರ ಸಂಪರ್ಕ: ಅನುಕೂಲ

Last Updated 4 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ರಾಜ್ಯದ ತುತ್ತತುದಿಯ ಬೀದರ್‌ನಿಂದ ಬೆಂಗಳೂರಿಗೆ ನೇರ ಸಂಪರ್ಕ ಕಲ್ಪಿಸುವ ರೈಲು ಸೇವೆ ಪ್ರಾರಂಭವಾಗಿರುವುದು ನಿಜಕ್ಕೂ ಸಂತಸದ ವಿಷಯ. ಬೀದರ್ ಜಿಲ್ಲೆಯ ಜನತೆಗೆ ಇದರಿಂದ ತುಂಬಾ ಅನುಕೂಲವಾಗಲಿದೆ.

ಹಾಗೆಯೇ ಈಗ ವಾರಕ್ಕೆ ಮೂರು ದಿನ ಸಂಚರಿಸುವ ಈ ಬೀದರ್-ಯಶವಂತಪುರ ಎಕ್ಸ್‌ಪ್ರೆಸ್ ರೈಲನ್ನು ಮುಂದಿನ ದಿನಗಳಲ್ಲಿ ನಿತ್ಯವೂ ಸಂಚರಿಸುವಂತೆ ಮಾಡಬೇಕು.

ಹಾಗೆ ಆದಾಗ ಮಾತ್ರ ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿರುವ ಏಕೀಕರಣದ ಕನಸು ನನಸಾಗಿದೆ ಎಂಬ ಮಾತು ಇನ್ನಷ್ಟು ಬಲವಾಗುವುದು.

ಈ ರೈಲು ಪ್ರಾರಂಭಗೊಳ್ಳುವಲ್ಲಿ ಶ್ರಮ ವಹಿಸಿದ ಸಂಸದ ಧರ್ಮಸಿಂಗ್ ಮತ್ತು ರೈಲ್ವೆ ಸಚಿವರಿಗೆ ಅಭಿನಂದನೆಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT