ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ನೌಕರರಿಗೆ ವಿಶೇಷ ಯೋಜನೆ

Last Updated 14 ಫೆಬ್ರುವರಿ 2012, 8:40 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರೈಲ್ವೆ ನೌಕರರಿಗಾಗಿ ನಗರದ ಎಸ್‌ಬಿಐನ ಮುಖ್ಯ ಕಚೇರಿ ವಿಶೇಷ ಯೋಜನೆಯನ್ನು ಜಾರಿಗೆ ತಂದಿದ್ದು ಈಚೆಗೆ ನಡೆದ ಸಮಾರಂಭದಲ್ಲಿ ನೈರುತ್ಯ ರೈಲ್ವೆಯ ಮುಖ್ಯ ಸಿಬ್ಬಂದಿ ಅಧಿಕಾರಿ ಅಮಿತ್ ಕುಮಾರ್ ಬ್ರಹ್ಮೋ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈಲ್ವೆ ಹಾಗೂ ಎಸ್‌ಬಿಐ, ದೇಶದಲ್ಲಿ ಅತ್ಯಧಿಕ ನೌಕರರನ್ನು ಹೊಂದಿರುವ ಸಂಸ್ಥೆಗಳಾಗಿದ್ದು ಇವೆರಡೂ ಕೈಜೋಡಿಸಿ ಜಾರಿಗೆ ತಂದಿರುವ ಈ ಯೋಜನೆಯಿಂದ ರೈಲ್ವೆ ನೌಕರರಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು.
 
ಎಸ್‌ಬಿಐ ಆಡಳಿತ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಬಿ. ವೇಣುಗೋಪಾಲ ರೆಡ್ಡಿ, ಎಸ್‌ಬಿಐ ಮೂಲಕ ವೇತನ ಪಡೆದುಕೊಳ್ಳುವ ರೈಲ್ವೆ ನೌಕರರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳ ಬಹುದಾಗಿದೆ ಎಂದು ತಿಳಿಸಿದರು.

ಗೃಹ ಸಾಲ, ಕಾರು ಸಾಲ ಹಾಗೂ ವೈಯಕ್ತಿಕ ಸಾಲದ ಬಡ್ಡಿಯಲ್ಲಿ ಕಡಿತ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಈ ಯೋಜನೆ ಹೊಂದಿದೆ ಎಂದು ಅವರು ಹೇಳಿದರು. ಎಸ್‌ಬಿಐಯ ಐ.ಎಂ.ರಮೇಶ, ವಿದ್ಯಾನಾಥನ್ ಮತ್ತಿತರರು  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT