`ಎರಡೂ ಮಾರ್ಗಗಳಲ್ಲಿ ಹೊಸದಾಗಿ ರೈಲ್ವೆ ಸಂಚಾರ ಆರಂಭಿಸುವ ಬಗ್ಗೆ ಸಮೀಕ್ಷೆ ನಡೆಸುವುದಾಗಿ ಪ್ರಸಕ್ತ ವರ್ಷದ ರೈಲ್ವೆ ಬಜೆಟ್ನಲ್ಲಿ ಪ್ರಕಟಿಸಲಾಗಿತ್ತು. ಈ ಬಗ್ಗೆ ಸಚಿವರು ಮಂಗಳವಾರ ದೆಹಲಿಯಲ್ಲಿ ರೈಲ್ವೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು. ಸಮೀಕ್ಷೆಗೆ ರಾಜ್ಯ ಸರ್ಕಾರ ಇನ್ನೂ ಅನುಮತಿ ನೀಡಿಲ್ಲ ಎಂಬ ವಿಷಯ ಸಭೆಯಲ್ಲಿ ತಿಳಿದುಬಂತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಸಚಿವರು ಆದಷ್ಟು ಬೇಗ ಅನುಮತಿ ನೀಡುವಂತೆ ಕೋರಿದ್ದಾರೆ~ ಎಂದು ಮೊಯಿಲಿ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.