ನೆಲಮಂಗಲ: ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿನರಸಮ್ಮ (80) ಭಾನುವಾರ ಸಂಜೆ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಹೃದಯ ತೊಂದರೆಯಿಂದ ಬಳಲುತ್ತಿದ್ದರು. ನೆಲಮಂಗಲ ತಾಲ್ಲೂಕು ಬೋರ್ಡ್ನ ಪ್ರಥಮ ಉಪಾಧ್ಯಕ್ಷೆ ಯಾಗಿ, ಎಪಿಎಂಸಿ ನಿರ್ದೇಶಕಿಯಾಗಿ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಯಾಗಿ, ಮಹಿಳಾ ಕ್ಷೇಮಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಂಗನಾಥ್ ಸೇರಿದಂತೆ ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸೋಮವಾರ ಮಧ್ಯಾಹ್ನ ಒಂದು ಗಂಟೆಗೆ ಪಟ್ಟಣದ ಸುಭಾಷ್ನಗರದಲ್ಲಿ ಅಂತ್ಯಸಂಸ್ಕಾರ ನಡೆಯಿತು.