ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯ ಸಹ ಸದಸ್ಯರನ್ನಾಗಿ ಎಂ.ಆರ್.ಬಾಳೀಕಾಯಿ (ಧಾರವಾಡ), ಪುರುಷೋತ್ತಮ ಅಡ್ವೆ (ಉಡುಪಿ) ಹಾಗೂ ಸಂಗಪ್ಪ ಬಸವಂತಪ್ಪ ತೋಗುಣಸಿ (ಬೆಂಗಳೂರು) ಅವರನ್ನು ನೇಮಕ ಮಾಡಲಾಗಿದೆ.
ಇದೇ ಜುಲೈ 5ರಂದು ನಡೆದ ಅಕಾಡೆಮಿಯ ಸರ್ವಸದಸ್ಯರ ಸಭೆಯಲ್ಲಿ ಈ ಮೂವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷ ಚಿ.ಸು. ಕೃಷ್ಣ ಸೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.