ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೀಲಾವತಿಗೆ ಅವಮಾನ!

Last Updated 24 ಸೆಪ್ಟೆಂಬರ್ 2013, 19:44 IST
ಅಕ್ಷರ ಗಾತ್ರ

ಚೆನ್ನೈ: ಇಲ್ಲಿ ನಡೆದ ಭಾರತೀಯ ಚಿತ್ರರಂಗದ ಶತಮಾನೋತ್ಸವದ ಕೊನೆಯ ದಿನವಾದ ಮಂಗಳವಾರ ಕನ್ನಡದ ಹಿರಿಯ ನಟಿ ಲೀಲಾವತಿ ಹಾಗೂ ಅವರ ಮಗ, ನಟ ವಿನೋದ್ ರಾಜ್ ಅವರಿಗೆ ಸಭಾಂಗಣದ ಒಳಗೆ ಪ್ರವೇಶ ನೀಡದೆ ವಾಪಸ್‌ ಕಳಿಸಲಾಯಿತು.

ಈ ಬಗ್ಗೆ ‘ಪ್ರಜಾವಾಣಿ’ ಯೊಂದಿಗೆ ಮಾತನಾಡಿದ ಲೀಲಾವತಿ, ‘ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಲು   ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನನಗೆ ಆಹ್ವಾನ ನೀಡಿತ್ತು. ಮಂಗಳವಾರದ ಸಮಾರೋಪ ಸಮಾರಂಭಕ್ಕೆ ತಡವಾಗಿ ಬರಲು ಹೇಳ­ಲಾಗಿತ್ತು.
ಅದರಂತೆ ಸಂಜೆ ನಾಲ್ಕು ಗಂಟೆಗೆ ಸ್ಥಳಕ್ಕೆ ತೆರಳಿದಾಗ ಪೊಲೀಸರು ಒಳಗೆ ಬಿಡಲಿಲ್ಲ. ನಮ್ಮ ಚಿತ್ರರಂಗಕ್ಕೆ ಸಂಬಂಧಿಸಿದವರಿಗೆ ಕರೆ ಮಾಡಿದರೇ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಇದು ತುಂಬಾ ನೋವುಂಟು ಮಾಡಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT