ಸೂರತ್ (ಪಿಟಿಐ): 2002ರಿಂದ 2005ರ ವರೆಗೂ ತಮ್ಮ ಆಶ್ರಮದಲ್ಲಿ ಇಲ್ಲಿನ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಮ್ ಬಾಪು ಅವರ ಪುತ್ರ ನಾರಾಯಣ ಸಾಯಿಯನ್ನು ಗುರುವಾರ ದೆಹಲಿಯಿಂದ ಇಲ್ಲಿಗೆ ಕರೆತರಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.