ಮುದ್ದೇಬಿಹಾಳ: ಲೈಂಗಿಕತೆಯ ವಿಷಯದಲ್ಲಿ ಭಾರತೀಯ ಸಂಸ್ಕೃತಿ ಅನುಸರಿ ಸುತ್ತಿರುವ ಮಡಿವಂತಿಕೆಯೇ ಶ್ರೇಷ್ಠವಾದುದು ಎಂದು ಜಿಲ್ಲಾ ಏಡ್ಸ ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ಸುರೇಖಾ ಹಡಗಲಿ ಹೇಳಿದರು.
ಪಟ್ಟಣದ ಎಂ.ಜಿ.ವಿ.ಸಿ. ಕಾಲೇಜಿ ನಲ್ಲಿ ಎನ್.ಎಸ್.ಎಸ್. ಘಟಕ ಹಾಗೂ ರೆಡ್ ರಿಬ್ಬನ ಕ್ಲಬ್ ಆಯೋಜಿಸಿದ್ದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಲೈಂಗಿಕತೆಯಲ್ಲಿ ಸ್ವೇಚ್ಛಾಚಾರ ಸಲ್ಲದು. ಅಸುರಕ್ಷಿತವಾದ ಲೈಂಗಿಕ ಚಟುವಟಿಕೆಗಳಿಂದ ಏಡ್ಸ್ನಂತಹ ಮಾರಕ ರೋಗಗಳು ಬರುತ್ತವೆ. ಯುವಕರು ವಿವೇಚನೆಯಿಂದ ವರ್ತಿಸುವ ಮೂಲಕ ರೋಗಗಳನ್ನು ತಡೆಗಟ್ಟಬಹುದು ಎಂದು ಹೇಳಿದರು.
ಪ್ರಾಚಾರ್ಯ ಈಶ್ವರಚಂದ್ರ ಕೌಜಲಗಿ ಅಧ್ಯಕ್ಷತೆ ವಹಿಸಿದ್ದರು. ಆಪ್ತ ಸಮಾಲೋಚಕಿ ಸುಜಾತಾ ಕಡೇಮನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಟಿ.ಎಸ್.ಪಾಟೀಲ, ದೈಹಿಕ ಶಿಕ್ಷಣ ನಿರ್ದೇಶಕ ಎಚ್.ಜಿ.ಪಾಟೀಲ ಉಪಸ್ಥಿತರಿದ್ದರು. ಉಪನ್ಯಾಸಕರಾದ ಎಸ್.ಎಸ್.ಹೂಗಾರ ಪ್ರಾಸ್ತಾ ವಿಕವಾಗಿ ಮಾತನಾಡಿದರು. ಬಸವ ರಾಜ ಕೋರಿ ನಿರೂಪಿಸಿದರು. ಪ್ರಭಾರ ಪ್ರಾಚಾರ್ಯ ಐ.ಎಸ್.ತಳವಾರ ವಂದಿಸಿದರು.
ಮುದ್ದೇಬಿಹಾಳ: ಲೈಂಗಿಕತೆಯ ವಿಷಯದಲ್ಲಿ ಭಾರತೀಯ ಸಂಸ್ಕೃತಿ ಅನುಸರಿ ಸುತ್ತಿರುವ ಮಡಿವಂತಿಕೆಯೇ ಶ್ರೇಷ್ಠವಾದುದು ಎಂದು ಜಿಲ್ಲಾ ಏಡ್ಸ ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ಸುರೇಖಾ ಹಡಗಲಿ ಹೇಳಿದರು.
ಪಟ್ಟಣದ ಎಂ.ಜಿ.ವಿ.ಸಿ. ಕಾಲೇಜಿ ನಲ್ಲಿ ಎನ್.ಎಸ್.ಎಸ್. ಘಟಕ ಹಾಗೂ ರೆಡ್ ರಿಬ್ಬನ ಕ್ಲಬ್ ಆಯೋಜಿಸಿದ್ದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಲೈಂಗಿಕತೆಯಲ್ಲಿ ಸ್ವೇಚ್ಛಾಚಾರ ಸಲ್ಲದು. ಅಸುರಕ್ಷಿತವಾದ ಲೈಂಗಿಕ ಚಟುವಟಿಕೆಗಳಿಂದ ಏಡ್ಸ್ನಂತಹ ಮಾರಕ ರೋಗಗಳು ಬರುತ್ತವೆ. ಯುವಕರು ವಿವೇಚನೆಯಿಂದ ವರ್ತಿಸುವ ಮೂಲಕ ರೋಗಗಳನ್ನು ತಡೆಗಟ್ಟಬಹುದು ಎಂದು ಹೇಳಿದರು.
ಪ್ರಾಚಾರ್ಯ ಈಶ್ವರಚಂದ್ರ ಕೌಜಲಗಿ ಅಧ್ಯಕ್ಷತೆ ವಹಿಸಿದ್ದರು. ಆಪ್ತ ಸಮಾಲೋಚಕಿ ಸುಜಾತಾ ಕಡೇಮನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಟಿ.ಎಸ್.ಪಾಟೀಲ, ದೈಹಿಕ ಶಿಕ್ಷಣ ನಿರ್ದೇಶಕ ಎಚ್.ಜಿ.ಪಾಟೀಲ ಉಪಸ್ಥಿತರಿದ್ದರು. ಉಪನ್ಯಾಸಕರಾದ ಎಸ್.ಎಸ್.ಹೂಗಾರ ಪ್ರಾಸ್ತಾ ವಿಕವಾಗಿ ಮಾತನಾಡಿದರು. ಬಸವ ರಾಜ ಕೋರಿ ನಿರೂಪಿಸಿದರು. ಪ್ರಭಾರ ಪ್ರಾಚಾರ್ಯ ಐ.ಎಸ್.ತಳವಾರ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.