ಹೈದರಾಬಾದ್ (ಪಿಟಿಐ): ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ.ಚಂದ್ರಶೇಖರ ರಾವ್ ಅವರು ಮೇಡಕ್ ಲೋಕಸಭೆ ಕ್ಷೇತ್ರ ಹಾಗೂ ಗಜ್ವೇಲ್ ವಿಧಾನಸಭೆ ಕ್ಷೇತ್ರ ಎರಡೂ ಕಡೆಗಳಿಂದ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಮೆಹಬೂಬ್ನಗರದ ಸಂಸದರಾಗಿರುವ ಅವರು ಲೋಕಸಭೆ ಹಾಗೂ ವಿಧಾನಸಭೆ ಎರಡೂ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಚಂದ್ರಶೇಖರ್ ಅವರ ಪುತ್ರಿ ಕವಿತಾ ಅವರು ನಿಜಾಮಾಬಾದ್ ಕ್ಷೇತ್ರದಿಂದ ಲೊಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಪಕ್ಷ ಲೋಕಸಭೆ ಹಾಗೂ ವಿಧಾನಸಭೆಗೆ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.