ಈ ಹಿನ್ನೆಲೆಯಲ್ಲಿ ಆನ್ಲೈನ್ ಮೂಲಕ ಕಂಪ್ಯೂಟರ್ಗೆ ಮಾಹಿತಿ ತುಂಬಲು ತಿರುಮಲೈ ಎರಡು ಸಾವಿರ ರೂಪಾಯಿ ಲಂಚಕ್ಕಾಗಿ ಒತ್ತಾಯಿಸಿದ್ದರು. ಬುಧವಾರ ಸಂಜೆ ಶಮಂತಕುಮಾರ್ ಅವರಿಂದ ಮುಂಗಡ ಒಂದು ಸಾವಿರ ರೂಪಾಯಿ ಲಂಚದ ಹಣ ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದರು.
ಲೋಕಾಯುಕ್ತ ಎಸ್ಪಿ ಎ.ಬಿ.ಸುಧಾಕರ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ನಾಗರಾಜ್, ಇನ್ಸ್ಪೆಕ್ಟರ್ಗಳಾದ ಎಸ್.ಮಂಜುನಾಥ್, ಲೋಕೇಶ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.