ಗದಗ: ಲೋಕಾಯುಕ್ತ ಅಧಿಕಾರಿಗಳು ಜಿಲ್ಲೆಯ ತಾಲ್ಲೂಕುಗಳಿಗೆ ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ, ದೂರು, ಅರ್ಜಿ ಮತ್ತು ಅಹವಾಲು ಸ್ವೀಕರಿಸಲಿದ್ದಾರೆ.
ಜಿ.ಆರ್.ಪಾಟೀಲ ಮತ್ತು ಎಂ.ಐ. ನಡುವಿನಮನಿ ಅವರು ಅ. 11 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿರಹಟ್ಟಿಯ ಬೇಂದ್ರೆ ಭವನದಲ್ಲಿ , ಜಿ.ಆರ್. ಪಾಟೀಲ್ ಮತ್ತು ಸಂಗನಗೌಡ ಅವರು 16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ನರಗುಂದ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ಜಿ.ಆರ್. ಪಾಟೀಲ ಮತ್ತು ಶ್ರೀ ಸಂಗನಗೌಡ ಅವರು 17 ರಂದು 11 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ರೋಣ ತಾಲ್ಲೂಕು ಪಂಚಾಯತಿ ಸಭಾ ಭವನದಲ್ಲಿ ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆ ತಿಳಿಸಿದೆ.