ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಒಂದು ತಿಂಗಳಿಂದ ಬೆಸ್ಕಾಂ ಇಲಾಖೆ ವಿದ್ಯುತ್ ಕಡಿತ ಮಾಡುತ್ತಿದೆ. ಇದರಿಂದ ಬೆಳೆ ಒಣಗಿದ್ದು, ಈಗಾಗಲೇ ಕಷ್ಟಕ್ಕೆ ಸಿಲುಕಿರುವ ರೈತರ ಸ್ಥಿತಿ ಮತ್ತಷ್ಟು ಜಟಿಲಗೊಂಡಿದೆ ಎಂದು ಪ್ರತಿಭಟನಾ ನಿರತರು ಆಪಾದಿಸಿದರು. ಗ್ರಾಮೀಣ ಪ್ರದೇಶದಲ್ಲಿ ನಿತ್ಯ ಎಂಟು ಗಂಟೆ ತ್ರಿಪೇಸ್, 12 ಗಂಟೆ ಸಿಂಗಲ್ ಪೇಸ್ ವಿದ್ಯುತ್ ನೀಡಬೇಕು ಎಂಬ ಸರ್ಕಾರದ ಆದೇಶವಿದೆ. ಆದರೆ ಕನಿಷ್ಠ 3 ಗಂಟೆ ಕೂಡ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಅಲ್ಲದೆ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ವಿದ್ಯಾರ್ಥಿಗಳಿಗೆ ಕೂಡ ತೊಂದರೆ ಆಗುತ್ತಿದೆ. ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಮಸ್ಯೆ ನಿವಾರಿಸದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಸಂಘದ ರಾಜ್ಯ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ತಾಲ್ಲೂಕು ಘಟಕ ಅಧ್ಯಕ್ಷ ಟಿ.ಎನ್.ರಾಮೇಗೌಡ, ಮುನಿಸ್ವಾಮಿಗೌಡ, ಚಲಪತಿ, ಮೋಹನ್, ನಾರಾಯಣಸ್ವಾಮಿ, ಶಿವಕುಮಾರ್, ಎಂ.ಶೋಭಾ, ವೆಂಕಟಪ್ಪ, ಪ್ರಸನ್ನ, ಸುಬ್ರಮಣಿ, ವೆಂಕಟಸ್ವಾಮಿ ಇತರರು ಭಾಗವಹಿಸಿದ್ದರು.