ಅಧಿಕ ಮೊತ್ತದ ಆಸೆಗಾಗಿ ಹಲವು ಸಂಸ್ಥೆಗಳು ನಿಗದಿತ ಸಂಖ್ಯೆಗಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿವೆ. ಇದು ವಿದ್ಯಾರ್ಥಿಗಳ ಕಲ್ಯಾಣಕ್ಕಿಂತ ಆಯಾ ಸಂಸ್ಥೆಗಳ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತಿದೆ' ಎಂದು ನ್ಯಾಯಮೂರ್ತಿಗಳಾದ ಕೆ.ಎಸ್. ರಾಧಾಕೃಷ್ಣನ್ ಹಾಗೂ ಎ.ಕೆ. ಸಿಕ್ರಿ ಅವರನ್ನು ಒಳಗೊಂಡ ಪೀಠ ಹೇಳಿದೆ.
ವೈದ್ಯಕೀಯ, ಎಂಜಿನಿಯರಿಂಗ್, ನರ್ಸಿಂಗ್ ಹಾಗೂ ಔಷಧ ವಿಜ್ಞಾನ ಕಾಲೇಜುಗಳಲ್ಲಿಯ ಶಿಕ್ಷಣದ ಗುಣಮಟ್ಟ ಕುಸಿಯಲು ಕ್ಯಾಪಿಟೇಷನ್ ಶುಲ್ಕವೇ ಕಾರಣವಾಗಿದೆ. ವಿಶೇಷವಾಗಿ ವೈದ್ಯಕೀಯ ವಿಭಾಗದಲ್ಲಂತೂ ಪರಿಸ್ಥಿತಿ `ಗಂಭೀರ'ವಾಗಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದಿದೆ.