ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕ್ಫ್‌ ಮಂಡಳಿ ಅಧ್ಯಕ್ಷರ ಮನೆಯಲ್ಲಿ ಕಳವು

Last Updated 16 ಡಿಸೆಂಬರ್ 2013, 20:26 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವಕ್ಫ್‌ ಮಂಡಳಿಯ ಅಧ್ಯಕ್ಷ ಅಬ್ದುಲ್‌ ರಿಯಾಜ್‌ ಖಾನ್‌ ಅವರ ಮನೆಯ ಬಾಗಿಲು ಮುರಿದು ದುಷ್ಕರ್ಮಿಗಳು ₨ 7 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಇಂದಿರಾನಗರದಲ್ಲಿ ಭಾನುವಾರ ನಡೆದಿದೆ.

ಇಂದಿರಾನಗರ 13ನೇ ಅಡ್ಡರಸ್ತೆಯ ನಿವಾಸಿ ರಿಯಾಜ್‌ ಖಾನ್‌ ಅವರು ಭಾನುವಾರ ಸಂಜೆ 4 ಗಂಟೆಗೆ ಕುಟುಂಬ ಸದಸ್ಯರ ಜತೆಗೆ ದೊಮ್ಮಲೂರು ಸಮೀಪದ ಸಂಬಂಧಿಯೊಬ್ಬರ ಮನೆಗೆ ಹೋಗಿದ್ದರು. ರಾತ್ರಿ 9 ಗಂಟೆಗೆ ಅವರು ಮನೆಗೆ ವಾಪಸ್‌ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ಮನೆಯ ಮುಂಬಾಗಿಲು ಮುರಿದು ಆರು ಚಿನ್ನದ ಬಳೆ, ಒಂದ ಚಿನ್ನದ ಸರ, ಒಂದು ಚಿನ್ನದ ಉಂಗುರ, ಒಂದು ಜೊತೆ ಕಿವಿಯ ಓಲೆ ಹಾಗೂ ₨ 50 ಸಾವಿರ ನಗದು ದೋಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT