ಶಂಕರ್ ನಿರ್ಮಿಸುತ್ತಿರುವ `ವರದನಾಯಕ~ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಚಿತ್ರಕ್ಕೆ ಈವರೆಗೂ ತೊಂಬತ್ತು ದಿನಗಳ ಚಿತ್ರೀಕರಣ ನಡೆದಿದೆ.
ಅಯ್ಯಪ್ಪ.ಪಿ.ಶರ್ಮ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಸುದೀಪ್ ಹಾಗೂ ಚಿರಂಜೀವಿ ಸರ್ಜಾ ನಟಿಸುತ್ತಿದ್ದಾರೆ. ನಿಖಿತಾ ಪಾಟೀಲ್, ಸಮೀರಾ ರೆಡ್ಡಿ, ಮುಖ್ಯಮಂತ್ರಿ ಚಂದ್ರು, ಜೈಜಗದೀಶ್, ಶೋಭ್ರಾಜ್, ಶರತ್ ಲೋಹಿತಾಶ್ವ, ಬುಲೆಟ್ ಪ್ರಕಾಶ್, ಶರಣ್, ಪದ್ಮಜಾರಾವ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ರಾಕೇಶ್ ಛಾಯಾಗ್ರಾಹಕರಾಗಿರುವ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಈಶ್ವರ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ, ಮೋಹನ್.ಬಿ.ಕೆರೆ ಕಲಾ ನಿರ್ದೇಶನ ಚಿತ್ರಕ್ಕಿದೆ.