ರೌಡಿ ಪಟ್ಟಿ ಯಲ್ಲಿರುವವರಿಗೆ ಸೂಚನೆ ನೀಡಿ ತಮ್ಮ ಚಟುವಟಿಕೆಗಳನ್ನು ಬದ ಲಾಯಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ಸೇರುವಂತೆ ತಿಳಿಸಲಾಗಿದೆ. ಸೂಚನೆಯನ್ನು ಮೀರಿ ಅಕ್ರಮ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮುಂದುವರೆದಲ್ಲಿ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡೀಪಾರಿಗೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
ರೌಡಿ ಪಟ್ಟಿಯಲ್ಲಿರುವವರ ನಡವಳಿಕೆಯಲ್ಲಿ ಬದಲಾವಣೆ ಕಂಡು ಬಂದಲ್ಲಿ ಪರಿಶೀಲಿಸಿ ರೌಡಿ ಪಟ್ಟಿಯಿಂದ ತೆಗೆಯುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.ಪೊಲೀಸ್ ಠಾಣೆಗಳನ್ನು ಜನಸ್ನೇಹಿ ಠಾಣೆಗಳನ್ನಾಗಿ ಮಾಡುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಠಾಣೆಗಳಿಗೆ ಬಂದು ದೂರು ನೀಡಲು ಭಯ ಪಡುತ್ತಿದ್ದಾರೆ. ದೂರವಾಣಿಗಳ ಮೂಲಕ ದೂರು ನೀಡುತ್ತಿದ್ದಾರೆ. ಯಾವುದೇ ಭಯವಿಲ್ಲದೇ ಠಾಣೆಗಳಿಗೆ ಬಂದು ದೂರು ನೀಡಬೇಕು ಎಂದು ತಿಳಿಸಿದರು.
ಹೆಚ್ಚುವರಿ ಎಸ್ಪಿ ಅಬ್ದುಲ್ ಅಹದ್, ಡಿವೈಎಸ್ಪಿ ಬಲರಾಮೇಗೌಡ, ಅತ್ತಿಬೆಲೆ ವೃತ್ತ ನಿರೀಕ್ಷಕ ಬಿ.ಕೆ.ಕಿಶೋರ್ ಕುಮಾರ್್, ಆನೇಕಲ್ ಸಿಪಿಐ ರಾಜೇಂದ್ರ, ಜಿಗಣಿ ಸಿಪಿಐ ಮಲ್ಲೇಶ್, ಪಿಎಸ್ಐಗಳಾದ ರಾಘವೇಂದ್ರ ಬೈಂದೂರು, ಶಶಿಧರ್, ಚೇತನ್ ಕುಮಾರ್, ಪ್ರಕಾಶ್, ಹನು ಮಂತರಾಜು ಇದ್ದರು.ಪೊಲೀಸರು ಪಟ್ಟಣದಲ್ಲಿ ಪೆರೇಡ್ ನಡೆಸಿ ಸಾರ್ವಜನಿಕರಲ್ಲಿ ವಿಶ್ವಾಸ ತುಂಬಿದರು.