ಇದಕ್ಕಾಗಿ ಮೈಸೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಕಳೆದ ಜುಲೈ ನಿಂದ ಪ್ರತಿ ಗರ್ಭಿಣಿ ಮತ್ತು ಬಾಣಂತಿಗೆ ತಿಂಗಳಿಗೆ 10 ಕೆ.ಜಿ. ಆಹಾರಧಾನ್ಯ ನೀಡುವ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 1 ಕೆ.ಜಿ. ತೊಗರಿ ಹಾಗೂ 4 ಕೆ.ಜಿ. ಗೋಧಿ, 3 ಕೆ.ಜಿ.ಅಕ್ಕಿ ವಿತರಿಸಲಾಗುತ್ತಿದೆ. ಅಂಗನವಾಡಿ ಕೇಂದ್ರ ಕ್ಕೆ ಬರುವ ಮಕ್ಕಳಿಗೂ ಮೊಳಕೆಕಾಳು, ಹೆಸರು ಕಾಳು, ಬೆಲ್ಲ, ಅಕ್ಕಿ, ಗೋಧಿಯಿಂದ ತಯಾರಿಸಿದ ಪೌಷ್ಟಿಕ ಆಹಾರ, ಮಧ್ಯಾಹ್ನ ಅನ್ನ ಸಾಂಬಾರು, ವಾರಕ್ಕೊ ಮ್ಮೆಹಾಲು, ಮೊಟ್ಟೆ ನೀಡಲಾಗುತ್ತಿದೆ ಎಂದರು.