ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲ್ಯಾಪುರೆ ಪದತ್ಯಾಗ

Last Updated 8 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಗುಲ್ಬರ್ಗ/ ಹುಬ್ಬಳ್ಳಿ: ಫ್ಯಾಕ್ಸ್ ಮೂಲಕ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿರುವುದಾಗಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಸುನೀಲ್ ವಲ್ಯಾಪುರೆ ಹುಬ್ಬಳ್ಳಿಯಲ್ಲಿ ಶನಿವಾರ ಬಹಿರಂಗಪಡಿಸಿದರು.

`ಶನಿವಾರ ರಾತ್ರಿ ರಾಜೀನಾಮೆ ಪತ್ರವನ್ನು ಕಳುಹಿಸಿದ್ದೇನೆ. ಆದರೆ ಶೆಟ್ಟರ್ ಅದನ್ನು ಸ್ವೀಕರಿಸಿಲ್ಲ. ಹೀಗಾಗಿ ಭಾನುವಾರ ಬೆಳಿಗ್ಗೆ ಮತ್ತೊಮ್ಮೆ ರಾಜೀನಾಮೆ ಪತ್ರವನ್ನು ಕಳುಹಿಸಿ ಕೊಡುತ್ತೇನೆ' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ `ಭಾನುವಾರ ಹಾವೇರಿಯಲ್ಲಿ ನಡೆಯುವ ಕೆಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದೇನೆ' ಎಂದು ಅವರು ಹೇಳಿದರು. ಅವರು ಕೆಲವು ದಿನಗಳಿಂದ ತಮ್ಮ ಸ್ವಕ್ಷೇತ್ರವಾದ ಗುಲ್ಬರ್ಗ ಜಿಲ್ಲೆಯ ಚಿಂಚೋಳಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಕೆಜೆಪಿ ಸೇರ್ಪಡೆ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT