ಕಳೆದ ವರ್ಷ 21 ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಗಿತ್ತು. ಈ ಸಲ 21 ಮಕ್ಕಳನ್ನು ಗುರುತಿಸಲಾಗಿದೆ. ಕಾರ್ಗಿಲ್ ಸಮರದ ನಂತರದ ಕಾರ್ಯಾಚರಣೆಗಳಲ್ಲಿ ಮಡಿದ ಯೋಧರ 8 ರಿಂದ 15 ವಯೋಮಾನದ ಮಕ್ಕಳಿಗೆಲ್ಲ ಶಿಕ್ಷಣ ಮುಂದುವರಿಸಲು ನೆರವಾಗುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಪ್ರತಿಷ್ಠಾನ ದ ಸಂಸ್ಥಾಪಕಿ, ನೃತ್ಯ ಕಲಾವಿದೆ ಸುಭಾಷಿಣಿ ವಸಂತ್ ವಿವರಿಸಿದರು. ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರ ರಕ್ಷಣೆ ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾದ ಪತಿ ಕರ್ನಲ್ ವಸಂತ್ ಅವರ ನೆನಪಿನಲ್ಲಿ ಸುಭಾಷಿಣಿ 2007ರಲ್ಲಿ ಈ ಪ್ರತಿಷ್ಠಾನ ಸ್ಥಾಪಿಸಿದ್ದಾರೆ. ಇದು ಹುತಾತ್ಮ ಯೋಧರ ಕುಟುಂಬಕ್ಕೆ ಆರ್ಥಿಕ, ಸಾಮಾಜಿಕ ಮತ್ತು ಕಾನೂನು ನೆರವು ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.