ತಾಲ್ಲೂಕು ಪಂಚಾಯಿತಿ ವತಿಯಿಂದ ನೇತೇನಹಳ್ಳಿ ಗಾಮ ಪಂಚಾಯಿತಿಗೆ 2010-11ನೇ ಸಾಲಿನಲ್ಲಿ 127 ಬಸವ ಇಂದಿರಾ ಆವಾಸ್ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡಿರುವುದಾಗಿ ಅಧಿಕಾರಿಗಳು ತಿಳಿಸುತ್ತಾರೆ. ಆದರೆ ಬಡವರಿಗೆ ಮನೆ ನೀಡದೇ ಹಣವಂತರಿಗೆ ಸರ್ಕಾರದಿಂದ ಬರುವ ಮನೆಗಳನ್ನು ನೀಡಿದ್ದಾರೆ ಎಂದು ದಲಿತ ಸಂರ್ಘಸ ಸಮಿತಿ ಆರೋಪಿಸಿದೆ. ಬಡವರಿಗೆ ಮನೆ ಮಂಜೂರು ಮಾಡದಿದ್ದರೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕುವುದಾಗಿ ಸಮಿತಿ ಎಚ್ಚರಿಸಿದೆ.