ಬೆಂಗಳೂರು: ಬೆಂಗಳೂರು ನಗರ ಗೃಹ ನಿರ್ಮಾಣ ಸಹಕಾರ ಸೊಸೈಟಿ ಕನಕಪುರ ರಸ್ತೆ ಬಳಿಯ ವಾಜರಹಳ್ಳಿಯಲ್ಲಿ ವಶಪಡಿಸಿಕೊಂಡಿದ್ದ ಭೂಮಿಯನ್ನು ಹಿಂತಿರುಗಿಸುವ ಸಂಬಂಧ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡಬೇಕು ಎಂದು ಕೋರಿ ವಾಜರಹಳ್ಳಿಯ ಭೂ ಮಾಲೀಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿದೆ.
ಬೆಂಗಳೂರು ನಗರ ಗೃಹ ನಿರ್ಮಾಣ ಸಹಕಾರ ಸೊಸೈಟಿ 1999ರಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 80 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಆದರೆ ಈ ಪ್ರದೇಶದಲ್ಲಿ ನಿಗದಿತ ಅವಧಿಯಲ್ಲಿ ಯಾವುದೇ ಕಾಮಗಾರಿ ನಡೆದಿರಲ್ಲಿಲ್ಲ. ಇದನ್ನು ಪ್ರಶ್ನಿಸಿ ಇಬ್ಬರು ಭೂ ಮಾಲೀಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆಗ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.
ಈ ಆದೇಶದ ಆಧಾರ ಮೇಲೆ ಇತರೆ ಭೂ ಮಾಲೀಕರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಾದ ಹಾಗೂ ಪ್ರತಿ ವಾದ ಆಲಿಸಿರುವ ಪೀಠ ತೀರ್ಪನ್ನು ಕಾಯ್ದಿರಿಸಿದೆ.