ಇತ್ತೀಚೆಗೆ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು, ತಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ ವೇತನ ನೀಡುವುದೂ ಕಷ್ಟವಾಗಿರುವುದಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಸಂಸ್ಥೆಗೆ ಅವಶ್ಯವಿರುವ ಬಿಡಿ ಭಾಗಗಳು, ಹೊಸ ಬಸ್ ಖರೀದಿ ಮಾಡಲು ಅಸಾಧ್ಯವಾಗಿರುವುದರಿಂದ ಪ್ರಯಾಣಿಕರ ಬೇಡಿಕೆ ಈಡೇರಿಸಲು ತಮ್ಮಿಂದ ಸಾಧ್ಯವಿಲ್ಲ ಎಂದು ಕೈಚಿಲ್ಲಿ ಕುಳಿತಿದ್ದಾರೆ. ಅಲ್ಲದೇ ಈ ಭಾಗದಲ್ಲಿ ಹುಬ್ಬಳ್ಳಿ, ಗದಗ, ಧಾರವಾಡ, ಶಿರಸಿ, ಮುಂತಾದ ಕಡೆಗಳಲ್ಲಿ ನಗರದ ಹೊರವಲಯದಲ್ಲಿ ಹೊಸ ಬಸ್ಸು ನಿಲ್ದಾಣಗಳನ್ನು ನಿರ್ಮಿಸಿದ್ದು, ಅವು ಸಾಮಾನ್ಯ ಪ್ರಯಾಣಿಕರಿಗೆ ಪ್ರಯೋಜನವಾಗಿರುವುದಿಲ್ಲ.