ಬೆಂಗಳೂರು: ಯಶವಂತಪುರದಲ್ಲಿರುವ ಕೇಂದ್ರಿಯ ವಿದ್ಯಾಲಯ ಐಐಎಸ್ಸಿ ವತಿಯಿಂದ ಶನಿವಾರ ಆಯೋಜಿಸಿದ್ದ ವಾರ್ಷಿಕ ಕ್ರೀಡಾ ದಿನಾಚರಣೆಯಲ್ಲಿ ವಿವಿಧ ಕ್ರೀಡೆಗಳು, ಯೋಗ, ಪಿರಮಿಡ್ ಮಾದರಿಯ ಕಸರತ್ತುಗಳು ಜರುಗಿದವು.
ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲ್ನ ನಿರ್ದೇಶಕ ಚಂದ್ರಶೇಖರ್, ವಿದ್ಯಾಲಯದ ಪ್ರಾಂಶುಪಾಲ ಕೆ.ಎನ್.ಭಟ್ ಇತರರು ಉಪಸ್ಥಿತರಿದ್ದರು.