ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿಬಾಲ್: ಕರ್ನಾಟಕ ತಂಡಕ್ಕೆ ನಿರಾಸೆ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಮಹಿಳಾ ತಂಡದವರು ರಾಯಪುರದಲ್ಲಿ ನಡೆಯುತ್ತಿರುವ 60ನೇ ಸೀನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸೋಲು ಕಂಡರು.

ಸೋಮವಾರ ನಡೆದ ಪಂದ್ಯದಲ್ಲಿ ಪಶ್ವಿಮ ಬಂಗಾಳ 25-14, 17-25, 25-21, 25-20ರಲ್ಲಿ ಕರ್ನಾಟಕದ ಎದುರು ಗೆಲುವು ಪಡೆದರು. ಎರಡನೇ ಸೆಟ್‌ನಲ್ಲಿ ಕರ್ನಾಟಕ ಗೆಲುವು ಸಾಧಿಸಿದರೂ, ಪಂದ್ಯ ಗೆದ್ದುಕೊಳ್ಳಲು ಆಗಲಿಲ್ಲ.

ಪುರುಷರ ವಿಭಾಗದಲ್ಲಿ ಕಳೆದ ಸಲದ ಚಾಂಪಿಯನ್ ತಮಿಳುನಾಡು ಈ ಸಲವೂ ನಾಲ್ಕರಘಟ್ಟ ಪ್ರವೇಶಿಸಿದೆ. ಈ ತಂಡ ಎಂಟರ ಘಟ್ಟದ ಪಂದ್ಯದಲ್ಲಿ 21-25, 25-13, 26-28, 25-20ರಲ್ಲಿ ಪಂಜಾಬ್ ತಂಡವನ್ನು ಮಣಿಸಿತು.
ಇದೇ ವಿಭಾಗದ ಇನ್ನೊಂದು ಪಂದ್ಯದಲ್ಲಿ ಸರ್ವಿಸಸ್ 25-23, 25-27, 19-25, 25-17, 15-12ರಲ್ಲಿ ಹರಿಯಾಣಕ್ಕೆ ಸೋಲುಣಿಸಿತು.

ಮಹಿಳೆಯರ ವಿಭಾಗದಲ್ಲಿ ರೈಲ್ವೆಸ್ 25-10, 25-15, 25-8ರಲ್ಲಿ ಉತ್ತರ ಪ್ರದೇಶದ ಮೇಲೂ, ಆಂಧ್ರ ಪ್ರದೇಶ 25-22, 28-30, 25-13, 25-17ರಲ್ಲಿ ಹಿಮಾಚಲ ಪ್ರದೇಶದ ವಿರುದ್ಧವೂ ಜಯಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT