ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿಬಾಲ್: ಭಾರತ ತಂಡಕ್ಕೆ ಗೆಲುವು

Last Updated 19 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ತಂಡದವರು ಚೀನಾದ ಚೆಂಗ್ಡುವಿನಲ್ಲಿ ನಡೆಯುತ್ತಿರುವ 9ನೇ ಏಷ್ಯನ್ ಯೂತ್ ಬಾಲಕಿಯರ ವಾಲಿಬಾಲ್ ಚಾಂಪಿಯನ್‌ಷಿಪ್‌ನಲ್ಲಿ 3-1 ಸೆಟ್‌ಗಳಿಂದ ಕಜಕಸ್ತಾನ ತಂಡವನ್ನು ಸೋಲಿಸಿದರು.
ಭಾರತ ಮೊದಲ ಸೆಟ್‌ನಲ್ಲಿ 19-25ರಲ್ಲಿ ಸೋಲು ಕಂಡಿತು. ನಂತರ ಮೂರು ಸೆಟ್‌ಗಳಲ್ಲಿ 25-21, 25-15  26-24ರಲ್ಲಿ ಸತತ ಗೆಲುವು ಸಾಧಿಸಿತು.

ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಪ್ರಶಸ್ತಿಯ ಕನಸು ಈಗಾಗಲೇ ಅಸ್ತಮಿಸಿದೆ. ಆದ್ದರಿಂದ ಐದು ಹಾಗೂ ಆರನೇ ಸ್ಥಾನಕ್ಕಾಗಿ ಭಾರತ ತಂಡ ಥಾಯ್ಲೆಂಡ್ ಎದುರು ಶನಿವಾರ ಸೆಣಸಲಿದೆ ಎಂದು ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ.

ಮಳೆ ಅಡ್ಡಿ: ಉದ್ಯಾನನಗರಿಯಲ್ಲಿ ನಡೆಯುತ್ತಿರುವ ರಾಜ್ಯ `ಎ~ ಡಿವಿಷನ್ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಶುಕ್ರವಾರದ ಪಂದ್ಯಗಳಿಗೆ ಮಳೆ ಅಡ್ಡಿಯಾಯಿತು.ಮಧ್ಯಾಹ್ನ ಭಾರೀ ಮಳೆ ಸುರಿದ ಕಾರಣ ಪಂದ್ಯಗಳನ್ನು ಭಾನುವಾರಕ್ಕೆ ಮುಂದೂಡಲಾಗಿದೆ. ನಿಗದಿತ ವೇಳಾಪಟ್ಟಿಯ ಪ್ರಕಾರ ಶನಿವಾರ ಎಸ್‌ಡಬ್ಲ್ಯುಆರ್-ಎಂಇಜಿ ಮತ್ತು ಕೆಎಸ್‌ಪಿ-ಎಲ್‌ಐಸಿ  ನಡೆಯಲಿದೆ.

ದಸರಾ ಹಾಫ್ ಮ್ಯಾರಥಾನ್ ಮುಂದೂಡಿಕೆ
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 21ರಂದು ನಡೆಯಬೇಕಿದ್ದ ರಾಜ್ಯಮಟ್ಟದ ಹಾಫ್ ಮ್ಯಾರಥಾನ್ ಓಟದ ಸ್ಪರ್ಧೆಯನ್ನು ಮುಂದೂಡಲಾಗಿದೆ.

ಸಮಯದ ಅಭಾವ ಮತ್ತು ಕೆಲವು ಅನಿವಾರ್ಯ ಕಾರಣಗಳಿಂದಾಗಿ ಹಾಫ್ ಮ್ಯಾರಥಾನ್ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT