ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ತತ್ವ ಪಾಲಿಸಲು ಸಲಹೆ

Last Updated 14 ಅಕ್ಟೋಬರ್ 2011, 4:55 IST
ಅಕ್ಷರ ಗಾತ್ರ

ಮರಿಯಮ್ಮನಹಳ್ಳಿ: ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡು ವಂತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಚಾರ್ಯ ಬಿ.ಶಂಕ್ರಪ್ಪ ಹೇಳಿದರು.

ಅವರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.ಮಕ್ಕಳಲ್ಲಿ ಒಳ್ಳೆಯ ಭಾವನೆ ಬಿತ್ತುವುದರ ಜತೆಗೆ, ಸಮಾಜದಲ್ಲಿ ಗುರು ಹಿರಿಯರನ್ನು ಗೌರವದಿಂದ ಕಾಣುವ ಗುಣ ಬೆಳಸಬೇಕಿದೆ, ಅಲ್ಲದೆ ಮಕ್ಕಳಲ್ಲಿ ನಮ್ಮ ಪುರಾಣ, ಗ್ರಂಥಗಳ ಬಗ್ಗೆ ತಿಳಿಸಕೊಡುವದರ ಜತೆಗೆ ಅದರಲ್ಲಿನ ಸತ್ವವನ್ನು ಮನದಟ್ಟು ಮಾಡಿಕೊಡಬೇಕೆಂದರು.

ಮಕ್ಕಳನ್ನು ವಿದ್ಯಾವಂತರನ್ನಾಗಿಸಿ ಸಮಾಜದಲ್ಲಿ ಉತ್ತಮರನ್ನಾಗಿ ರೂಪಿಸ ಬೇಕಿದೆ, ಇದಕ್ಕೆ ವಾಲ್ಮೀಕಿಯವರ ಜೀವನವೇ ಒಂದು ದಾರಿ ದೀಪ ವಾಗಿದ್ದು, ಮಹಾನ್ ಗ್ರಂಥ ನೀಡಿದ ಮಹರ್ಷಿ ವಾಲ್ಮೀಕಿಯವರ ಕೊಡುಗೆ ಅಪಾರವಾಗಿದೆ. ಅವರ ಜೀವನವೇ ಎಲ್ಲರಿಗೂ ಮಾರ್ಗದರ್ಶನವಾಗಿದ್ದು, ಎಲ್ಲರೂ ಅದನ್ನು ಪಾಲಿಸುವಂತೆ ತಿಳಿದರು.
 
ಎಸ್‌ಡಿಎಂಸಿ ಉಪಾಧ್ಯಕ್ಷ ಕೊಟ್ಗಿ ನಾಗಪ್ಪ ಅವರು ಮಹರ್ಷಿ ವಾಲ್ಮೀಕಿ ಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಉದ್ಘಾಟಿಸಿದರು. ಶಿಕ್ಷಕ ಕುಮಾರ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಸ್‌ಡಿಎಂಸಿ ಸದಸ್ಯರಾದ ಕುಪ್ಪಿನಕೇರಿ ವೆಂಕಟೇಶ್, ಹೂಗಾರ್ ಲಲಿತಮ್ಮ, ಉದ್ದೇಕಲ್ ವೆಂಕಟೇಶ್, ಪೂಜಾರ್ ಬಸಪ್ಪ, ಶಿಕ್ಷಕರಾದ ಸುಭಾಷ್, ದುರುಗಪ್ಪ, ವರ್ಧಮಾನ್, ಸುಶೀಲಮ್ಮ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT