ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಸಂಸದೀಯ ವ್ಯವಹಾರಗಳ ಸಚಿವ ಕಮಲ್ನಾಥ್ ಅವರು ವಾಲ್ಮಾರ್ಟ್ ಲಾಬಿ ಪ್ರಕರಣದ ಕುರಿತಾದ ಮಾಧ್ಯಮ ವರದಿ ಬಗ್ಗೆ ತನಿಖೆ ನಡೆಸಲು ಸರ್ಕಾರವು ನಿವೃತ್ತ ನ್ಯಾಯಾಧೀಶರನ್ನು ನೇಮಿಸಲಿದೆ ಎಂದು ಸದನದಲ್ಲಿ ತಿಳಿಸಿದರು.
ಭಾರತದ ಚಿಲ್ಲರೆ ಮಾರುಕಟ್ಟೆ ಪ್ರವೇಶಿಸಲು ಲಾಬಿ ನಡೆಸಿರುವ ಬಗ್ಗೆ ವಾಲ್ ಮಾರ್ಟ್ ಅಮೆರಿಕದ ಸೆನೆಟ್ ಗೆ ಸಲ್ಲಿಸಿರುವ ವರದಿ ಕಳೆದೆರಡು ದಿನಗಳಿಂದ ಸಂಸತ್ನಲ್ಲಿ ಕೋಲಾಹಲ ಸೃಷ್ಟಿಸಿತ್ತು. ನಿಗದಿತ ಅವಧಿಯಲ್ಲಿ ಪ್ರಕರಣದ ತನಿಖೆ ನಡೆಸಲು ಸಂಸದೀಯ ಸಮಿತಿ ಇಲ್ಲವೇ ನ್ಯಾಯಾಂಗ ಸಮಿತಿಗೆ ಒಪ್ಪಿಸುವಂತೆ ಪ್ರತಿಪಕ್ಷಗಳು ಆಗ್ರಹಿಸಿದ್ದವು.