ಮುಳಬಾಗಲು: ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮದರಸ ಬಳಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ತವೆರಾ ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಆರ್.ಟಿ.ನಗರದ ಸಜಿ ಮೋಹನ್ (38) ಹಾಗೂ ಅವರ ಒಂದೂವರೆ ವರ್ಷದ ಮಗು ಅಭಯಕೃಷ್ಣ ಮೃತಪಟ್ಟವರು.ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುವಾಗ ಅಪಘಾತ ನಡೆದಿದೆ. ವಾಹನ ಹಿಂದಿಕ್ಕಲು ಯತ್ನಿಸಿದ ಸಮಯದಲ್ಲಿ ಈ ಘಟನೆ ನಡೆದಿದೆ.