ಹೊಸಕೋಟೆ: ಬೆಂಗಳೂರು ರಸ್ತೆ ಬೂದಿಗೆರೆ ಕ್ರಾಸ್ ಬಳಿ ವಾಹನ ಡಿಕ್ಕಿ ಹೊಡೆದು ಅಪರಿಚಿತ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
40 ವರ್ಷ ವಯಸ್ಸಿನ ವ್ಯಕ್ತಿ ಬಿಳಿ ಬಣ್ಣದ ಪ್ಯಾಂಟ್ ಹಾಗೂ ಶರ್ಟ್ ಧರಿಸಿದ್ದರು. ಶವವನ್ನು ಬೌರಿಂಗ್ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ.
ಶವ ಪತ್ತೆ: ಆವಲಹಳ್ಳಿ ಠಾಣೆ ವ್ಯಾಪ್ತಿಯ ಬಿದರಹಳ್ಳಿಯ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿನ ಕಲ್ಯಾಣಿಯಲ್ಲಿ ಶವ ಪತ್ತೆಯಾಗಿದೆ.
ಸುಮಾರು 55 ವರ್ಷ ವಯಸ್ಸಿನ ಆ ವ್ಯಕ್ತಿ ಕಪ್ಪು ಬಣ್ಣದ ಪ್ಯಾಂಟ್, ತುಂಬು ತೋಳಿನ ಗೆರೆಯುಳ್ಳ ಶರ್ಟ್ ಧರಿಸಿದ್ದರು. ಅವರು ಆಕಸ್ಮಿಕವಾಗಿ ನೀರಿಗೆ ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಬೈಕ್ ಕಳವು
ನೆಲಮಂಗಲ: ಪಟ್ಟಣದ ಇಂದಿರಾನಗರದ ನಿವಾಸಿ ಬಿ.ಎನ್.ಪ್ರಕಾಶ್ ಅವರು ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಮಂಗಳವಾರ ರಾತ್ರಿ ಕಳವಾಗಿದೆ.