ಬೆಂಗಳೂರು: ಕಾರ್ಮಿಕ ಮತ್ತು ರೇಷ್ಮೆ ಸಚಿವರ ಆಪ್ತ ಸಹಾಯಕ ವಿ.ಎಚ್.ನಾರಾಯಣಪ್ಪ ಮಂಗಳವಾರ ನಿಧನರಾದರು. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಅವರು ಮಂಗಳವಾರ ಕೊನೆಯುಸಿರೆಳೆದರು. ಮೃತರ ನಿಧನಕ್ಕೆ ಕಾರ್ಮಿಕ ಮತ್ತು ರೇಷ್ಮೆ ಸಚಿವ ಬಿ.ಎನ್. ಬಚ್ಚೇಗೌಡ ಸಂತಾಪ ಸೂಚಿಸಿದ್ದಾರೆ.