ಬೆಂಗಳೂರು: ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವರಾಯನ ಪಟ್ಟಾಭಿಷೇಕವಾಗಿ 500 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ‘ವಿಜಯನಗರ ಥೀಮ್ ಪಾರ್ಕ್’ಗೆ 2011-12ರ ಬಜೆಟ್ನಲ್ಲಿ 100 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
ಇದಲ್ಲದೆ ಹಂಪಿ ನಗರದ ಅಭಿವೃದ್ಧಿಗಾಗಿ ರೂ. 10 ಕೋಟಿ ನೀಡುವ ಭರವಸೆ ಬಜೆಟ್ನಲ್ಲಿದೆ. ಹೊಸ ಮೂಲಸೌಕರ್ಯ ಕಾಮಗಾರಿಗಳನ್ನು ಆರಂಭಿಸಲು ಈ ವರ್ಷದ ಬಜೆಟ್ನಲ್ಲಿ 50 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.ಈ ವರ್ಷ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಬಜೆಟ್ನಲ್ಲಿ 250 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದೆ.
ಇದಲ್ಲದೆ, 2010-11ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಯ ಜೋಗಿಮಟ್ಟಿಯಲ್ಲಿ ಪರಿಸರ ಪ್ರವಾಸೋದ್ಯಮ ಯೋಜನೆ, ಧಾರವಾಡದ ಸಾಧನಕೇರಿಯ ಸೌಂದರ್ಯ ವರ್ಧನೆ, ಮಲ್ಪೆ, ಮರವಂತೆ, ಸೇಂಟ್ ಮೇರಿ ದ್ವೀಪ ಮತ್ತು ಗೋಕರ್ಣಗಳಲ್ಲಿ ಪ್ರವಾಸೋದ್ಯಮ ಸೌಕರ್ಯ ಅಭಿವೃದ್ಧಿಪಡಿಸುವ ಕೆಲಸ ನಡೆದಿದೆ ಎಂದು ಬಜೆಟ್ನಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.