ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ಆತ್ಮಹತ್ಯೆ

Last Updated 19 ಡಿಸೆಂಬರ್ 2013, 19:49 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರಣ್ಯಪುರದ ಎಂ.ಎಸ್.ಪಾಳ್ಯದಲ್ಲಿ ಬುಧವಾರ ರಾತ್ರಿ ಸುಧಾಂಶು ಕುಮಾರ್ (21) ಎಂಬ ಎಂಜಿನಿಯರಿಂಗ್‌ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಾರ್ಖಂಡ್‌ನ ಸುಧಾಂಶು, ಹೆಸರುಘಟ್ಟ ರಸ್ತೆ ಯಲ್ಲಿರುವ ಸಂಭ್ರಮ ಕಾಲೇಜಿನಲ್ಲಿ ಐದನೇ ಸೆಮಿಸ್ಟರ್‌ನಲ್ಲಿ ಎಂಜಿನಿ ಯರಿಂಗ್‌ ವ್ಯಾಸಂಗ ಮಾಡುತ್ತಿದ್ದರು. ಸ್ನೇಹಿತ ರವಿಕುಮಾರ್‌ ಜತೆ ಎಂ.ಎಸ್. ಪಾಳ್ಯದಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದ ಅವರು, ರಾತ್ರಿ ಮನೆ ಯಲ್ಲೇ ನೇಣು ಹಾಕಿ ಕೊಂಡಿದ್ದಾರೆ.

‘ಬುಧವಾರ ಪರೀಕ್ಷೆ ಬರೆದು ಮನೆಗೆ ಬಂದ ಸುಧಾಂಶು, ಪರೀಕ್ಷೆ ಸರಿಯಾಗಿ ಬರೆದಿಲ್ಲ ಎಂದು ಹೇಳಿದ್ದ. ಬಳಿಕ ಕೋಣೆಗೆ ತೆರಳಿದ ನಾನು, ಶುಕ್ರವಾರದ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ರಾತ್ರಿ 11 ಗಂಟೆಗೆ ನಿದ್ರೆಗೆ ಜಾರಿದ ನಂತರ  ಆತ ಕೋಣೆಯ ಬಾಗಿಲಿಗೆ ಹೊರಗಿನಿಂದ ಚಿಲಕ ಹಾಕಿ ನಡುಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಬೆಳಿಗ್ಗೆ ಎಚ್ಚರ ಗೊಂಡು ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಇರಲಿಲ್ಲ.

ಮೊಬೈಲ್‌ಗೆ ಕರೆ ಮಾಡಿದರೂ ಆತ ಕರೆ ಸ್ವೀಕರಿಸಲಿಲ್ಲ. ಬಳಿಕ ಮನೆ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದೆ’ ಎಂದು ರವಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT