ಗೌರಿಬಿದನೂರು: ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿ ವಿದ್ಯಾರ್ಥಿ ಕೈ ಕತ್ತರಿಸಿ, ಆತನ ತಂದೆಗೆ ಚೂರಿಯಿಂದ ಇರಿದಿರುವ ಘಟನೆ ತಾಲ್ಲೂಕಿನ ಡಿ.ಪಾಳ್ಯದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಇದೇ ಗ್ರಾಮದ ಹರೀಶ್, ಬಾಲಕೃಷ್ಣ, ಮಂಜು ಎನ್ನುವವರು ಕುಡಿದು ಮನೆ ಬಳಿ ಜಗಳವಾಡುವಾಗ ಮಚ್ಚಿನಿಂದ ವಿದ್ಯಾರ್ಥಿ ಅನಿಲ್ ಕುಮಾರ್ ಕೈ ಕತ್ತರಿಸಿ, ಆತನ ತಂದೆ ನಾರಾಯಣಪ್ಪ ಅವರ ಬೆನ್ನಿಗೆ ಚೂರಿ ಹಾಕಿ ಪರಾರಿಯಾಗಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಅನಿಲ್ಕುಮಾರ್ನನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾರಾಯಣಪ್ಪ ಗ್ರಾಮದಲ್ಲಿ ಕುರಿ ವ್ಯಾಪಾರ ನಡೆಸುತ್ತಿದ್ದರು ಎನ್ನಲಾಗಿದೆ.
ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.