ಹೈದರಾಬಾದ್ ಹೊರವಲಯದ ಉಪ್ಪಲ್ ಸಮೀಪದ ಮೆದಿಪಲ್ಲಿ ಎಂಬಲ್ಲಿ ಶುಕ್ರವಾರ ಮಧ್ಯರಾತ್ರಿ ಅಪರಿಚಿತ ವ್ಯಕ್ತಿಗಳು ಖಾಸಗಿ ಕಾಲೇಜಿನ ಬಸ್ಗೆ ಬೆಂಕಿ ಹಚ್ಚಿದ್ದು, ಈ ಸ್ಥಳದಲ್ಲಿ ಚೆರ್ಲಪಲ್ಲಿ ಜೈಲಿನಲ್ಲಿರುವ ಉಸ್ಮಾನಿಯಾ ವಿವಿಯ ಜಂಟಿ ಕ್ರಿಯಾ ಸಮಿತಿಯ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುವ ಪತ್ರಗಳು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಚೆರ್ಲಿಪಲ್ಲಿ ಜೈಲಿನಲ್ಲಿರುವ ಜೆಎಸಿ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.ಭಾನುವಾರದಿಂದ ಪ್ರಾರಂಭವಾಗುತ್ತಿದ್ದ ಉಸ್ಮಾನಿಯಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿವಿ ಮೂಲಗಳು ಹೇಳಿವೆ.