ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕನ ಮೇಲೆ ಪೋಷಕರಿಂದ ಹಲ್ಲೆ

Last Updated 5 ಡಿಸೆಂಬರ್ 2012, 19:39 IST
ಅಕ್ಷರ ಗಾತ್ರ

ಬಾಗಲಕೋಟೆ: ತರಗತಿಯಲ್ಲಿ ಗಲಾಟೆ ಮಾಡಿದ ಎಂದು ವಿದ್ಯಾರ್ಥಿಯೊಬ್ಬನ ಬೆನ್ನ ಮೇಲೆ ಬಾಸುಂಡೆ ಬರುವಂತೆ ಥಳಿಸಿದ ಶಿಕ್ಷಕನ ಮೇಲೆ ಪೋಷಕರು ಹಲ್ಲೆ ನಡೆಸಿದ ಘಟನೆ ನವ ನಗರದ ಸೆಕ್ಟರ್ ನಂ 34ರ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯಲ್ಲಿ  (ನಂ.2) ಬುಧವಾರ ನಡೆದಿದೆ.

7ನೇ ತರಗತಿ ವಿದ್ಯಾರ್ಥಿ ಆಕಾಶ ಕಾಟವೆ ತರಗತಿಯಲ್ಲಿ ಗಲಾಟೆ ಮಾಡಿದ ಕಾರಣ ಶಿಕ್ಷಕ ಸಿದ್ಧಲಿಂಗಪ್ಪ ಕರಿಲಿಂಗಣ್ಣವರ ಥಳಿಸಿದರು ಎನ್ನಲಾಗಿದೆ. ಶಿಕ್ಷಕರು ಥಳಿಸಿದ ವಿಷಯ ತಿಳಿದು ಶಾಲೆಗೆ ಬಂದ ಬಾಲಕನ ಪೋಷಕರು ಕರಿಲಿಂಗಣ್ಣ ಅವರನ್ನು ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದರು.

ಸ್ಥಳಕ್ಕೆ ಆಗಮಿಸಿದ ಶಿಕ್ಷಣ ಸಂಯೋಜನಾಧಿಕಾರಿ ಬಿ.ಆರ್. ಪಾಟೀಲ ಮತ್ತು ಪೊಲೀಸ್ ಸಿಬ್ಬಂದಿ ಶಿಕ್ಷಕ ಮತ್ತು ಪೋಷಕರ ನಡುವೆ ಸಂಧಾನ ಮಾಡಿ ವಾತಾವರಣವನ್ನು ತಿಳಿಗೊಳಿಸಿದರು. ಈ ಸಂಬಂಧ ಮೊಕದ್ದಮೆ ದಾಖಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT