ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್: 14ರಂದು ಸರ್ವಪಕ್ಷ ಸಭೆ

Last Updated 10 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: `ರಾಜ್ಯ ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಉತ್ತರ ಕಂಡುಕೊಳ್ಳುವುದಕ್ಕಾಗಿ ಚರ್ಚೆ ನಡೆಸಲು ಕೇಂದ್ರ ಸರ್ಕಾರದೊಂದಿಗೆ ಇದೇ 14ರಂದು ಸರ್ವಪಕ್ಷ ಸಭೆ ನಡೆಸಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.

ಸೋಮವಾರ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಕಾರ್ಯದ ಪ್ರಗತಿ ಪರಿಶೀಲನೆಗೆ ತೆರಳುವ ಮುನ್ನ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

`ವಿದ್ಯುತ್ ಸಮಸ್ಯೆ ಕಾಡುತ್ತಿರುವುದು ನಿಜ. ಹಾಗೆಂದು ನಾವು ಕೇಂದ್ರದ ಕಡೆಗೆ, ಕೇಂದ್ರದವರು ನಮ್ಮ ಕಡೆಗೆ ಬೆರಳು ತೋರಿಸುವುದು ಸರಿಯಲ್ಲ. ಸಮಸ್ಯೆ ಪರಿಹಾರಕ್ಕೆ ಎರಡೂ ಕಡೆಯವರು ಕುಳಿತು ಮಾತನಾಡಬೇಕಾಗಿದೆ~ ಎಂದು ಅವರು ಹೇಳಿದರು.

ಬರ ಪ್ರದೇಶ ಘೋಷಣೆಗೆ ಸಂಬಂಧಿಸಿ ಇದೇ 13ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿಗಳು~ ಹೋಬಳಿ ಪ್ರದೇಶಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸುವ ಕುರಿತು ಚರ್ಚಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT