ಬೆಂಗಳೂರು: ರಾಜಧಾನಿಯಲ್ಲಿ ವಿದ್ಯುತ್ ಪೂರೈಕೆ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಅನಿಯಮಿತ ಲೋಡ್ಶೆಡ್ಡಿಂಗ್ ಮುಂದುವರಿದಿದ್ದು, ಪದೇ ಪದೇ ವಿದ್ಯುತ್ ಕಡಿತ ಆಗುತ್ತಿದೆ.
ಶನಿವಾರ ನಗರದ ಹಲವೆಡೆ ಲೋಡ್ಶೆಡ್ಡಿಂಗ್ ಇರಲಿಲ್ಲ. ಆದರೆ ಕೆಲ ಬಡಾವಣೆಗಳಲ್ಲಿ 2-3 ಗಂಟೆ ವಿದ್ಯುತ್ ಕಡಿತ ಮಾಡಲಾಗಿತ್ತು. ವಿದ್ಯುತ್ ಖರೀದಿ ಮಾಡುತ್ತಿರುವುದರಿಂ ಹಾಗೂ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ 7ನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಆರಂಭವಾಗಿರುವುದರಿಂದ ಪೂರೈಕೆಯಲ್ಲಿ ಸುಧಾರಣೆಯಾಗಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.