ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ: 7 ಅಭ್ಯರ್ಥಿಗಳು ಕಣ್ಕೆ

Last Updated 18 ಏಪ್ರಿಲ್ 2013, 7:13 IST
ಅಕ್ಷರ ಗಾತ್ರ

ವಿರಾಜಪೇಟೆ: ವಿದಾನಸಭಾ ಚುನಾವಣೆಗೆ ಕೊನೆಯ ದಿನವಾದ ಬುಧವಾರ ವಿರಾಜಪೇಟೆಯ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು ಏಳು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಪಟ್ಟಣ ಪಂಚಾಯಿತಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಡಿ.ಎಸ್.ಮಾದಪ್ಪ, ಎಸ್‌ಡಿಪಿಐ ಅಭ್ಯರ್ಥಿ ಉಸ್ಮಾನ್, ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆನಿತ್ ಅಯ್ಯಪ್ಪ, ಸಿ.ಪಿ.ಐ.ಎಂ. ಪಕ್ಷದಿಂದ ಚಂಗಪ್ಪ ಹಾಗೂ ಪಕ್ಷೇತರ ಅಭ್ಯರ್ಥಿ ಗಿರಿ ಉತ್ತಮ್,  ಉದಯ, ಮಾರಣ್ಣ ದಿಲೀಪ್ ಕುಮಾರ, ವಿಜಯಸಿಂಗ್ ಆರ್.ಡೆವಿಡ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ ಪಕ್ಷದ ಅಭ್ಯರ್ಥಿ ಡಿ.ಎಸ್. ಮಾದಪ್ಪ ಮಾತನಾಡಿ, ಈ ಬಾರಿ ನಮ್ಮ ಪಕ್ಷವು ಶಾಂತಿ ಸೌಹಾರ್ದಯುತ ಆಡಳಿತ ನೀಡಲಿದೆ ಎನ್ನುವ ಮುಖಾಂತರ ಗೆಲುವು ನಮ್ಮದೆ ಎಂದು ತಿಳಿಸಿದರು.

ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆನಿತ್ ಅಯ್ಯಪ್ಪ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವು ವ್ಯಕ್ತಿತ್ವದ ಮೇಲೆ ನಿಂತಿದೆ. ಪಕ್ಷಕ್ಕಿಂತಲೂ ವ್ಯಕ್ತಿ ಮುಖ್ಯವಾಗಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT