ಸುವರ್ಣ ಸೌಧ (ಬೆಳಗಾವಿ): ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಮಾಫಿಯಾಗಳು ಪ್ರಭಾವಶಾಲಿಯಾಗಿ ಬೆಳೆದಿದ್ದು ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವಿಧಾನಪರಿಷತ್ತಿನಲ್ಲಿ ಆಗ್ರಹಿಸಿದ ವಿರೋಧ ಪಕ್ಷದ ನಾಯಕ ಡಿ.ವಿ. ಸದಾನಂದಗೌಡ, ಬೆಂಗಳೂರಿನ ಎರಡು ಕಾಲೇಜುಗಳಲ್ಲಿ ಬೆಳಕಿಗೆ ಬಂದ ಅಂಕಪಟ್ಟಿ ಹಗರಣಗಳನ್ನು ಲೋಕಾಯುಕ್ತಕ್ಕೆ ವಹಿಸಬೇಕು ಎಂದು ಒತ್ತಾಯಿಸಿದರು.
ರಾಜೀವ ಗಾಂಧಿ ಆರೋಗ್ಯ ವಿವಿ ತಿದ್ದುಪಡಿ ಮಸೂದೆ ಕುರಿತು ಮಾತನಾಡಿದ ಅವರು, ಬೆಂಗಳೂರಿನ ಭೂ ಮಾಫಿಯಾದಂತೆ ವಿವಿಗಳಲ್ಲಿ ಅಂಕಪಟ್ಟಿ ಮಾಫಿಯಾ ಬೆಳೆದು ನಿಂತಿದೆ, ಆರೋಗ್ಯ ವಿವಿಗೆ ಸಂಬಂಧಿಸಿ ಬೆಂಗಳೂರಿನ ಎರಡು ಕಾಲೇಜುಗಳಲ್ಲಿ ಫೇಲಾದ ವಿದ್ಯಾರ್ಥಿನಿಯರನ್ನು ಪಾಸ್ ಮಾಡಿರುವುದು ಬೆಳಕಿಗೆ ಬಂದಿದೆ.