ಬೆಂಗಳೂರು: `ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಪದವಿಗಳು, ವೃತ್ತಿಪರ ಕೋರ್ಸ್ಗಳಂತೆ ಬೆಳೆದು ನಿಂತಿರುವುದು ಉತ್ತಮ ಬೆಳವಣಿಗೆಯ ಸಂಕೇತವಾಗಿದೆ' ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಿ.ಶರ್ಮಾ ಹೇಳಿದರು.
ಅವರು ಈಚೆಗೆ ಸರ್ಕಾರಿ ಆರ್.ಸಿ.ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ `ಸೃಜನ ಆರ್.ಸಿ. ಹಾಗೂ ಸೃಜನ ಸಂಸ್ಕೃತಿ ವೇದಿಕೆ' ಏರ್ಪಡಿಸಿದ್ದ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
`ವಿಶ್ವವಿದ್ಯಾಲಯಗಳು ವೈವಿಧ್ಯಪೂರ್ಣ ಶಿಕ್ಷಣ ನೀಡುವ ತಾಣವಾಗಿದ್ದು, ವಿದ್ಯಾರ್ಥಿಗಳು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು' ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಚಾರ್ಯ ಡಾ.ವೇಣುಗೋಪಾಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ.ವಿಶ್ವಮೂರ್ತಿ ಹಾಜರಿ ದ್ದರು. ಇದೇ ಸಂದರ್ಭ ಕಾಲೇಜಿನ ಸಂಶೋಧನಾ ಕೇಂದ್ರ ಉದ್ಘಾಟಿಸಲಾಯಿತು.