ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ಇಂದುನೀರು ಪೂರೈಕೆಯಲ್ಲಿ ವ್ಯತ್ಯಯ

Last Updated 3 ಆಗಸ್ಟ್ 2012, 19:05 IST
ಅಕ್ಷರ ಗಾತ್ರ

ಬೆಂಗಳೂರು: ಹಾರೋಹಳ್ಳಿಯ ಕಾವೇರಿ ಕುಡಿಯುವ ನೀರು ಪೂರೈಕೆ ವ್ಯವಸ್ಥೆಯ ಕಂಡಕ್ಟರ್‌ನಲ್ಲಿ ದೋಷ ಕಂಡು ಬಂದಿರುವ ಹಿನ್ನೆಲೆಯಲ್ಲಿ ನಗರದ ವಿವಿಧೆಡೆಗಳಲ್ಲಿ ಶನಿವಾರ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನಗರದ ನೈರುತ್ಯ ಭಾಗದ ಜಾನ್ಸನ್ ಮಾರುಕಟ್ಟೆ, ಅಲಸೂರು, ಆಸ್ಟಿನ್‌ಟೌನ್, ನೀಲಸಂದ್ರ, ಆನೆಪಾಳ್ಯ, ದೊಮ್ಮಲೂರು, ಆಡುಗೋಡಿ, ಕೋರಮಂಗಲ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

`ಕಂಡಕ್ಟರ್‌ನಲ್ಲಿ ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ದೋಷ ಕಾಣಿಸಿಕೊಂಡಿತ್ತು. ಕೆಪಿಟಿಸಿಎಲ್ ಅಧಿಕಾರಿಗಳು ರಾತ್ರಿ 9 ಗಂಟೆಯ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳಿಸಿದ್ದಾರೆ.

ಒಂದನೇ ಹಂತದ ಯೋಜನೆಯ ದುರಸ್ತಿ ಕಾರ್ಯಕ್ಕೆ ಅಧಿಕ ಸಮಯ ಹಿಡಿದಿದೆ. ಉಳಿದ ಯೋಜನೆಗಳ ದುರಸ್ತಿ ಕಾರ್ಯಗಳು ಅರ್ಧ ಗಂಟೆಯಲ್ಲೇ ಪೂರ್ಣಗೊಂಡಿವೆ.

ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಶನಿವಾರ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ವ್ಯತ್ಯಯ ಅರ್ಧ ಗಂಟೆಯಿಂದ ಒಂದು ಗಂಟೆ ವರೆಗೆ ಇರಲಿದೆ~ ಎಂದು ಜಲಮಂಡಳಿಯ ಮುಖ್ಯ ಎಂಜಿನಿಯರ್ ಟಿ.ವೆಂಕಟರಾಜು `ಪ್ರಜಾವಾಣಿ~ಗೆ ಶುಕ್ರವಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT