ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವೇಕಾನಂದರ 150ನೇ ಜನ್ಮದಿನಾಚರಣೆ

Last Updated 12 ಸೆಪ್ಟೆಂಬರ್ 2013, 4:43 IST
ಅಕ್ಷರ ಗಾತ್ರ

ಕನಕಪುರ: ವಿವೇಕಾನಂದರ ತತ್ವ ಆದರ್ಶಗಳನ್ನು ಪ್ರತಿಯೊಬ್ಬ ಭಾರತೀ ಯನು ಮೈಗೂಡಿಸಿ ಕೊಳ್ಳಬೇಕೆಂದು ಸ್ವಾಮಿ ವಿವೇಕಾನಂದ ಸಮಿತಿಯ ಜಿಲ್ಲಾ ಪ್ರತಿನಿಧಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಮಲ್ಲಪ್ಪ ತಿಳಿಸಿದರು.

ತಾಲ್ಲೂಕಿನ ಹಾರೋಹಳ್ಳಿ ಪ್ರಗತಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಭಾರತದೌಡ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿಶ್ವಮಟ್ಟದಲ್ಲಿ ಭಾರತದ ಧಾರ್ಮಿ ಕತೆಯನ್ನು ಸಾರಿದ ಸ್ವಾಮಿ ವಿವೇಕಾ ನಂದರ ಸಂದೇಶವನ್ನು ಪ್ರತಿಯೊಂದು ಮನೆಗೂ ತಲುಪಿಸುವಂತ ಕೆಲಸವನ್ನು  ಸಂಘಟನೆ ಮಾಡುವುದು ಎಂದರು.

ನ್ಯಾಷನಲ್‌ ಕಾಲೇಜಿನ ಉಪನ್ಯಾಸಕ ಶ್ರೀನಿವಾಸ್‌ ಮತ್ತು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಮುಖ್ಯ ಶಿಕ್ಷಕ ಟಿ.ಎಚ್‌.ಹೊಸಮನಿ ಮಾತನಾಡಿದರು.

  ಪ್ರಗತಿ ಶಾಲೆಯ ಪ್ರಾಂಶುಪಾಲ  ಶಿವನಂಜಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟರಾಜು, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನೀಲಮ್ಮ, ಮುಖಂಡರಾದ ಎಚ್‌.ಕೆ. ಸುರೇಶ್‌, ಮುರಳೀಧರ್‌ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT