ಮಂಡ್ಯ: ರಾಜ್ಯ ಸರ್ಕಾರವು ಬಜೆಟ್ನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಡಿ. ದೇವರಾಜ ಅರಸು ಸ್ವಾಭಿಮಾನಿ ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಂ.ಪಿ. ಅರುಣ್ಕುಮಾರ್ ಆಗ್ರಹಿಸಿದರು.
ನಗರದಲ್ಲಿ ಇತ್ತೀಚೆಗೆ ವೇದಿಕೆ ಸಭೆಯಲ್ಲಿ ರಾಜ್ಯದಲ್ಲಿ ಶೇ 50 ರಷ್ಟು ಜನರು ಜನಾಂಗದವರಿದ್ದು, ಸಾಮಾ ಜಿಕ, ಆರ್ಥಿಕ, ಶೈಕ್ಷಣಿಕವಾಗಿ ತೀರ ಹಿಂದುಳಿದಿದ್ದಾರೆ. ಅವರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಕಾರ್ಯಕ್ಕೆ ನೀಡುವ ಸಾಲವನ್ನು 20 ಸಾವಿರದಿಂದ 50 ಸಾವಿರಕ್ಕೆ ಹೆಚ್ಚಿಸಬೇಕು.
ಸಹಾಯ ಧನವನ್ನೂ ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಎನ್. ಸೋಮಶೇಖರ್, ಎಂ. ಕುಮಾರ್, ನಾಗರತ್ನ ಉಪ್ಪಾರ, ಅಶೋಕ್, ರಾಜೇಶ್, ಮಹೇಶ್ ಮತ್ತಿತರರು ಪಾಲ್ಗೊಂಡಿದ್ದರು.