ಕೊಲಂಬೊ (ಐಎಎನ್ಎಸ್): ಶ್ರೀಲಂಕಾದ ಸ್ಪಿನ್ ಬೌಲರ್ ಮುತ್ತಯ್ಯ ಮುರಳೀಧರನ್ ಅವರು ವಿಶ್ವಕಪ್ ಕ್ರಿಕೆಟ್ ನಂತರ ನಿವೃತ್ತಿ ಹೊಂದುವ ನಿರ್ಧಾರವನ್ನು ಕೈಗೊಂಡಿದ್ದಾರೆ.
ಭಾರತ, ಶ್ರೀಲಂಕಾ ಹಾಗೂ ಬಾಂಗ್ಲಾದೇಶದಲ್ಲಿ ಫೆಬ್ರುವರಿ 19ರಿಂದ ನಡೆಯಲಿರುವ ವಿಶ್ವಕಪ್ ತಮ್ಮ ಕ್ರಿಕೆಟ್ ಜೀವನದ ಕೊನೆಯ ಟೂರ್ನಿ ಎಂದು ಮುರಳಿ ಅವರು ಶುಕ್ರವಾರ ಇಲ್ಲಿ ತಿಳಿಸಿದರು.