ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 67 ಕ್ಕೂ ಹೆಚ್ಚು ವಿಶ್ವಕರ್ಮ ಮಠ ಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ವಾಗಿದೆ. ಇವುಗಳಿಗೆ ಆರ್ಥಿಕ ನೆರವು ನೀಡಬೇಕು. ಪ್ರತಿ ವರ್ಷ ಸೆಪ್ಟೆಂಬರ್ 17ರಂದು ಸಾರ್ವತ್ರಿಕ ರಜೆ ಮತ್ತು ಸರ್ಕಾರದಿಂದಲೇ ವಿಶ್ವಕರ್ಮ ಪೂಜಾ ಮಹೋತ್ಸವ ಆಚರಣೆ ಮಾಡಬೇಕು, ಶಿಕ್ಷಣ ಸಂಸ್ಥೆಗಳ ನಿರ್ಮಾಣಕ್ಕೆ ಜಮೀನು, ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಅಮರ ಶಿಲ್ಪಿ ಜಕಣಾಚಾರ್ಯರ ಅಧ್ಯಯನ ಪೀಠ ಸ್ಥಾಪಿಸುವಂತೆ ಅವರು ಒತ್ತಾಯಿಸಿದರು.