ಬೆಂಗಳೂರು: ನಟ ದಿವಂಗತ ವಿಷ್ಣುವರ್ಧನ್ ಅವರ 61ನೇ ಜನ್ಮದಿನವನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು. ವಿಷ್ಣುವರ್ಧನ್ ಅವರ ಮನೆಗೆ ನೂರಾರು ಅಭಿಮಾನಿಗಳು ತೆರಳಿ ನಟನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ನಡುವೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಾಪಿಸಬೇಕು ಎಂದು ಅಭಿಮಾನಿಗಳು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಜಯನಗರದಲ್ಲಿ ವಿಷ್ಣು ಮನೆ ಎದುರು ಇರುವ ಉದ್ಯಾನಕ್ಕೆ `ಡಾ.ವಿಷ್ಣುವರ್ಧನ್ ವಿಶ್ರಾಂತಿ ವನ~ ಎಂದು ಬಿಬಿಎಂಪಿ ನಾಮಕರಣ ಮಾಡಿತು.