ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ ಮಹಾಸಭಾದಲ್ಲಿ ಖಂಡ್ರೆ ಅವ್ಯವಹಾರ: ಬೆಲ್ಲದ್ ಆರೋಪ

Last Updated 6 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಭೀಮಣ್ಣ ಖಂಡ್ರೆ ಮಹಾಸಭಾದಲ್ಲಿ ಬಹಳಷ್ಟು ಅವ್ಯವಹಾರಗಳನ್ನು ನಡೆಸಿದ್ದಾರೆ~ ಎಂದು ಶಾಸಕ ಚಂದ್ರಕಾಂತ ಬೆಲ್ಲದ್ ಆರೋಪಿಸಿದರು.

 ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಖಂಡ್ರೆ ತಮ್ಮ ಸೇವಾವಧಿ ಮುಗಿದಿದ್ದರೂ ಇನ್ನೂ ಅಧಿಕಾರಾ ವಧಿಯಿದೆ ಎಂದು ಸಾಧಿಸುತ್ತಿದ್ದಾರೆ. ಅಧಿಕಾರವಧಿ ಪೂರ್ಣಗೊಳ್ಳುವುದಕ್ಕಿಂತ 30 ದಿನಗಳು ಮೊದಲು ಚುನಾವಣೆ ಮಾಡಬೇಕಿತ್ತು. ಆದರೆ ಚುನಾವಣೆ ಕೈಗೊಳ್ಳದೆ, ಸಾರ್ವಭೌಮರಾಗಿ ವರ್ತಿಸುತಿದ್ದಾರೆ. ತಮ್ಮ ಪರವಾಗಿರುವವರನ್ನು ಮಾತ್ರ ಆಯಕಟ್ಟಿನ ಸ್ಥಾನದಲ್ಲಿ ಕೂರಿಸಿದ್ದಾರೆ~ ಎಂದು ಆಪಾದಿಸಿದರು.

`ಖಂಡ್ರೆ ಸದಸ್ಯತ್ವ ಶುಲ್ಕ ಪಾವತಿಸಿರುವ ಸುಮಾರು ನಾಲ್ಕು ಸಾವಿರ ಜನರಿಗೆ ಸದಸ್ಯತ್ವ ನೀಡದೆ, ತಮ್ಮ ಬೆಂಬಲಿಗರನ್ನು ಮಾತ್ರ ಸದಸ್ಯರನ್ನಾಗಿ ನೇಮಿಸಿಕೊಂಡಿದ್ದಾರೆ. ಇದರಿಂದ ಮಹಾಸಭೆಯನ್ನು ಅವರ ಸ್ವಾರ್ಥ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ~ ಎಂದು ದೂರಿದರು.

`ಈ ಕ್ರಮವನ್ನು ಪರಿಶೀಲಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಮಹಾಸಭೆಯ ಮಾಜಿ ಪದಾಧಿಕಾರಿಗಳಾದ ಬಿ.ಎಸ್. ಪರಮಶಿವಯ್ಯ, ಎಚ್.ಎಸ್. ಸಿದ್ದಲಿಂಗಯ್ಯ, ಗಂಗಮ್ಮ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT